ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಿಜೆಪಿ-ಜೆಡಿಎಸ್ ಪ್ರತಿಭಟನೆಯ ನಡುವೆಯೇ ಎರಡು ಮಸೂದೆಗಳಿಗೆ ಅಂಗೀಕಾರ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ವಿಧಾನ ಪರಿಷತ್ತಿನಲ್ಲಿ ಯಾವುದೇ ಚರ್ಚೆ ಇಲ್ಲದೆ ಎರಡು ಮಸೂದೆಗಳನ್ನು ಅಂಗೀಕರಿಸಲಾಯಿತು.
ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ಕರ್ನಾಟಕ ಪುರಸಭೆಗಳ ತಿದ್ದುಪಡಿ ಮಸೂದೆ 2026 ಮತ್ತು ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಹಾಗೂ ನಿರ್ವಹಣಾ ಮಸೂದೆ 2026 ಅನ್ನು ಅಂಗೀಕರಿಸಲಾಯಿತು.
ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಮಸೂದೆ
ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2026 ರಾಜ್ಯದಲ್ಲಿನ ಅಪಾರ್ಟ್ಮೆಂಟ್ಗಳ ಮಾಲೀಕತ್ವ, ಸಾಮಾನ್ಯ ಪ್ರದೇಶಗಳ ಬಳಕೆ ಹಾಗೂ ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ರೂಪಿಸುವ ಉದ್ದೇಶ ಹೊಂದಿದೆ.ಅಪಾರ್ಟ್ಮೆಂಟ್ ನಿವಾಸಿ ಕಲ್ಯಾಣ ಸಂಘಗಳನ್ನು ಹೊಸ ಕಾನೂನಿನಡಿಯಲ್ಲಿ ನೋಂದಾಯಿಸಬೇಕಾಗುತ್ತದೆ ಮತ್ತು ವಾರ್ಷಿಕ ಲೆಕ್ಕಪರಿಶೋಧನೆ ಕಡ್ಡಾಯವಾಗಿರುತ್ತವೆ ಎಂದು ಅವರು ತಿಳಿಸಿದರು.

